Monday, March 9, 2009

ಮುದ್ದು ಬರೆದ ಮಳೆ ಸಾಲುಗಳ ನೆನಪು


ಯಾಕೋ ಆಗಸ ಬಿಕ್ಕುತಿದೆ


ಹುಣ್ಣಿಮೆ ಕಡಲೂ ಉಕ್ಕುತಿದೆ


ರೆಕ್ಕೆ ನೆನೆದ ಚಿತ್ತದ ಹಕ್ಕಿಯು


ಕನಸು ಕಾಳುಗಳ ಹೆಕ್ಕುತಿದೆ




-----****--------




ಗಾಳಿಯೂ ಆಡದ


ಬಿರುಮಳೆ ಧಾರೆಗೆ


ಕಲ್ಲೂ ಕರಗಿದೆ


ಮಾತೂ ಆಡದ ಪ್ರೀತಿಗೆ


ಮುನಿಸು ಎಲ್ಲೋ ಕರಗಿದೆ




----*****------



ತೊಟ ತೊಟ ತೊಟ್ಟಿಕ್ಕುತ ಡೈರಿಯ


ಪುಟ ಪುಟ ಒದ್ದೆಯಾಗಿಸಿ


ಬರೆದದ್ದ ಅಳಿಸಿ


ಬೀಗಿದವು ಮಳೆಹನಿಗಳು


ಹನಿಗಳ ಸ್ಪರ್ಶಕೆ ನೆಂದ


ಹಳೆ ನೆನಪ ಬೀಜಗಳು


ಚಿಗುರಿದವು!


----*****------


ಹೇಳು ಮಳೆಯೇ


ಸುರಿದು


ಷೋಡಶಿಯೊಬ್ಬಳ


ನೆನೆಸದಿದ್ದರೆ


ನೀ ಸುರಿದೇನು ಫಲ?


-----*****------



ಹಸಿರುಟ್ಟ ಪುಟ್ಟಬಿತ್ತಕ್ಕೆ


ಮಳೆಹನಿ ಸೇಕ


ಅಲ್ಲಯವರೆಗೂ ಶೋಕ


ನಂತರ ಮರಗಳೆಲ್ಲ ಅಶೋಕ






6 comments:

ಮಿಥುನ ಕೊಡೆತ್ತೂರು said...

ವಾಹ್

Devi said...

respected sir,
dhayavittu nanna hosa blogspot annu odhi thamma abhiprayavannu thilisa bekagi vinathisuve.

DEVI.
navrang2008.blogspot.com

ರವಿರಾಜ್ ಆರ್.ಗಲಗಲಿ said...

hmm good poem priya...

Anonymous said...

ನಮಸ್ತೆ,

ಕವಿತೆಗಳು ಒಂದಕ್ಕಿಂತ ಒಂದು ಸೂಪರ್ ಆಗಿವೆ.

ಬರೆಯುತ್ತಿರಿ.

-ರಂಜಿತ್

ಈಶ್ವರ said...

Chennagide...

kiran said...

thamma blog thumba mechugeyaythu